1
ಪ್ರಕಟನೆ 20:15
ಕನ್ನಡ ಸಮಕಾಲಿಕ ಅನುವಾದ
KSB
ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.
Compare
Explore ಪ್ರಕಟನೆ 20:15
2
ಪ್ರಕಟನೆ 20:12
ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.
Explore ಪ್ರಕಟನೆ 20:12
3
ಪ್ರಕಟನೆ 20:13-14
ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು. ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.
Explore ಪ್ರಕಟನೆ 20:13-14
4
ಪ್ರಕಟನೆ 20:11
ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನು ಕಂಡೆನು. ಅದರ ಮೇಲೆ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ಓಡಿಹೋಗಿ ಸ್ಥಳ ಕಾಣಿಸದಂತಾದವು.
Explore ಪ್ರಕಟನೆ 20:11
5
ಪ್ರಕಟನೆ 20:7-8
ಆ ಸಾವಿರ ವರ್ಷಗಳು ಗತಿಸಿದ ಮೇಲೆ ಸೈತಾನನಿಗೆ ಅವನ ಸೆರೆಯಿಂದ ಬಿಡುಗಡೆಯಾಗುವುದು. ಅವನು ಹೊರಗೆ ಬಂದು ಭೂಮಿಯ ನಾಲ್ಕುದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ರಾಷ್ಟ್ರಗಳನ್ನು ಮೋಸಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು. ಅವರ ಸಂಖ್ಯೆಯು ಸಮುದ್ರತೀರದ ಮರಳಿನಷ್ಟಿರುವುದು.
Explore ಪ್ರಕಟನೆ 20:7-8