1
ಪ್ರಕಟನೆ 5:9
ಕನ್ನಡ ಸಮಕಾಲಿಕ ಅನುವಾದ
KSB
ಅವರು ಹೊಸಹಾಡನ್ನು ಹಾಡುತ್ತಾ, “ನೀವು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವುದಕ್ಕೆ ಯೋಗ್ಯರಾಗಿದ್ದೀರಿ. ಏಕೆಂದರೆ ನೀವು ವಧಿತರಾಗಿ, ನಿಮ್ಮ ರಕ್ತದಿಂದ ಸಕಲ ಕುಲ, ಭಾಷೆ, ಪ್ರಜೆ, ರಾಷ್ಟ್ರಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿರುವಿರಿ.
Compare
Explore ಪ್ರಕಟನೆ 5:9
2
ಪ್ರಕಟನೆ 5:12
ಅವರು, ಮಹಾಧ್ವನಿಯಿಂದ: “ವಧಿತರಾದ ಕುರಿಮರಿ ಆಗಿರುವವರು ಶಕ್ತಿ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಗೌರವ, ಮಹಿಮೆ, ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯರು!” ಎಂದು ಹೇಳಿದರು.
Explore ಪ್ರಕಟನೆ 5:12
3
ಪ್ರಕಟನೆ 5:10
ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.
Explore ಪ್ರಕಟನೆ 5:10
4
ಪ್ರಕಟನೆ 5:13
ಇದಲ್ಲದೆ ಆಕಾಶದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗಡೆಯೂ ಸಮುದ್ರದಲ್ಲಿಯೂ ಇರುವ ಎಲ್ಲಾ ಸೃಷ್ಟಿಗಳೂ ಹೀಗೆ ಹೇಳುವುದನ್ನು ಕೇಳಿದೆನು: “ಸಿಂಹಾಸನದ ಮೇಲೆ ಕುಳಿತಿರುವವರಿಗೂ ಕುರಿಮರಿ ಆಗಿರುವವರಿಗೂ ಸ್ತೋತ್ರ, ಗೌರವ, ಮಹಿಮೆ, ಶಕ್ತಿ, ಯುಗಯುಗಾಂತರಗಳಲ್ಲಿಯೂ ಇರಲಿ!”
Explore ಪ್ರಕಟನೆ 5:13
5
ಪ್ರಕಟನೆ 5:5
ಹಿರಿಯರಲ್ಲಿ ಒಬ್ಬನು ನನಗೆ, “ಅಳಬೇಡ! ನೋಡು, ಯೂದ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ವಂಶಜರೂ ಆಗಿರುವವರು ಆ ಸುರುಳಿಯನ್ನು ಅದರ ಏಳು ಮುದ್ರೆಗಳನ್ನು ಬಿಚ್ಚುವುದಕ್ಕೆ ಜಯವೀರರಾಗಿದ್ದಾರೆ,” ಎಂದು ಹೇಳಿದನು.
Explore ಪ್ರಕಟನೆ 5:5