1
ರೋಮಾಪುರದವರಿಗೆ 14:17-18
ಕನ್ನಡ ಸಮಕಾಲಿಕ ಅನುವಾದ
KSB
ಏಕೆಂದರೆ ತಿನ್ನುವುದೂ ಕುಡಿಯುವುದೂ ದೇವರ ರಾಜ್ಯವಲ್ಲ. ನೀತಿ, ಸಮಾಧಾನ, ಪವಿತ್ರಾತ್ಮರಲ್ಲಿರುವ ಆನಂದವೂ ಆಗಿದೆ. ಈ ರೀತಿಯಲ್ಲಿ ಕ್ರಿಸ್ತನಿಗೆ ಸೇವೆಮಾಡುವವರು ದೇವರಿಗೆ ಮೆಚ್ಚುಗೆಯಾದವರೂ ಜನರಿಂದ ಅನುಮೋದನೆ ಹೊಂದಿದವರೂ ಆಗಿರುತ್ತಾರೆ.
Compare
Explore ರೋಮಾಪುರದವರಿಗೆ 14:17-18
2
ರೋಮಾಪುರದವರಿಗೆ 14:8
ಬದುಕಿದರೆ ನಾವು ಕರ್ತನಿಗಾಗಿ ಬದುಕುತ್ತೇವೆ, ಸತ್ತರೆ ಕರ್ತನಿಗಾಗಿ ಸಾಯುತ್ತೇವೆ. ಹೀಗೆ ನಾವು ಬದುಕಿದರೂ ಸತ್ತರೂ ಕರ್ತನಿಗೆ ಸೇರಿದವರಾಗಿರುತ್ತೇವೆ.
Explore ರೋಮಾಪುರದವರಿಗೆ 14:8
3
ರೋಮಾಪುರದವರಿಗೆ 14:19
ಆದ್ದರಿಂದ ಯಾವುದು ನಮ್ಮನ್ನು ಸಮಾಧಾನಕ್ಕೂ ಪರಸ್ಪರ ಭಕ್ತಿವೃದ್ಧಿಗೂ ನಡೆಸುತ್ತದೋ ಅದನ್ನೇ ಮಾಡೋಣ.
Explore ರೋಮಾಪುರದವರಿಗೆ 14:19
4
ರೋಮಾಪುರದವರಿಗೆ 14:13
ಆದ್ದರಿಂದ ನಾವು ಒಬ್ಬರ ಮೇಲೊಬ್ಬರು ತೀರ್ಪುಮಾಡದಿರೋಣ. ಇದಲ್ಲದೆ ಸಹೋದರರಿಗೆ ಅಡೆತಡೆಯನ್ನಾಗಲಿ, ಅಡ್ಡಿಯನ್ನಾಗಲಿ, ಹಾಕದಿರೋಣ.
Explore ರೋಮಾಪುರದವರಿಗೆ 14:13
5
ರೋಮಾಪುರದವರಿಗೆ 14:11-12
ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಜೀವಿಸುವುದರಿಂದ, ಪ್ರತಿಯೊಬ್ಬರೂ ನನ್ನ ಮುಂದೆ ಮೊಣಕಾಲೂರುವರು. ಪ್ರತಿಯೊಂದು ನಾಲಿಗೆಯೂ ನನ್ನನ್ನು ದೇವರೆಂದು ಅರಿಕೆ ಮಾಡುವುದು,’ ಎಂದು ಕರ್ತನು ಹೇಳುತ್ತಾರೆ.” ಹೀಗಿರುವಾಗ ನಮ್ಮಲ್ಲಿ ಪ್ರತಿಯೊಬ್ಬರೂ ತಮ್ಮ ಬಗ್ಗೆ ದೇವರಿಗೆ ಲೆಕ್ಕ ಒಪ್ಪಿಸಬೇಕು.
Explore ರೋಮಾಪುರದವರಿಗೆ 14:11-12
6
ರೋಮಾಪುರದವರಿಗೆ 14:1
ಅಂಥವನ ಅಭಿಪ್ರಾಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ವಿಶ್ವಾಸದಲ್ಲಿ ಬಲಹೀನನಾಗಿರುವವನನ್ನು ಸ್ವೀಕರಿಸಿಕೊಳ್ಳಿರಿ.
Explore ರೋಮಾಪುರದವರಿಗೆ 14:1
7
ರೋಮಾಪುರದವರಿಗೆ 14:4
ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.
Explore ರೋಮಾಪುರದವರಿಗೆ 14:4