1
ರೋಮಾಪುರದವರಿಗೆ 3:23-24
ಕನ್ನಡ ಸಮಕಾಲಿಕ ಅನುವಾದ
KSB
ಏಕೆಂದರೆ ಎಲ್ಲರೂ ಪಾಪಮಾಡಿ ದೇವರ ಮಹಿಮೆಯನ್ನು ಹೊಂದದೆ ಹೋಗಿದ್ದಾರೆ. ಆದರೆ ಕ್ರಿಸ್ತ ಯೇಸುವಿನಲ್ಲಿ ಬಂದ ವಿಮೋಚನೆಯ ಮೂಲಕ ಅವರು ದೇವರ ಕೃಪೆಯಿಂದ ಉಚಿತವಾಗಿ ನೀತಿವಂತರೆಂದು ನಿರ್ಣಯ ಹೊಂದುತ್ತಾರೆ.
Compare
Explore ರೋಮಾಪುರದವರಿಗೆ 3:23-24
2
ರೋಮಾಪುರದವರಿಗೆ 3:22
ದೇವರ ನೀತಿಯು ನಂಬುವವರೆಲ್ಲರಿಗೆ ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಡುವುದರ ಮೂಲಕ ಲಭಿಸುತ್ತದೆ. ಇಲ್ಲಿ ಯಾವ ಭೇದವೂ ಇರುವುದಿಲ್ಲ.
Explore ರೋಮಾಪುರದವರಿಗೆ 3:22
3
ರೋಮಾಪುರದವರಿಗೆ 3:25-26
ಇದನ್ನು ನಂಬಿಕೆಯಿಂದ ಕ್ರಿಸ್ತ ಯೇಸುವಿನ ರಕ್ತದ ಮೂಲಕ ದೊರಕುವಂತೆ ದೇವರು ಕ್ರಿಸ್ತ ಯೇಸುವನ್ನು ನಮಗಾಗಿ ಪ್ರಾಯಶ್ಚಿತ್ತ ಬಲಿಯಾಗಿ ಒಪ್ಪಿಸಿದರು. ದೇವರು ಹಿಂದಿನ ಕಾಲದಲ್ಲಿ ಜನರು ಮಾಡಿರುವ ಪಾಪಗಳನ್ನು ದಂಡಿಸದೆ ತಮ್ಮ ನೀತಿಯನ್ನು ತೋರಿಸಿಕೊಡುವುದಕ್ಕಾಗಿಯೂ ಈಗಿನ ಕಾಲದಲ್ಲಿ ದೇವರು ತಮ್ಮ ನೀತಿಯನ್ನು ತೋರ್ಪಡಿಸಲೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕಾಗಿಯೂ ದೀರ್ಘಶಾಂತರಾಗಿದ್ದಾರೆ.
Explore ರೋಮಾಪುರದವರಿಗೆ 3:25-26
4
ರೋಮಾಪುರದವರಿಗೆ 3:20
ಆದ್ದರಿಂದ ಯಾರೂ ದೇವರ ದೃಷ್ಟಿಯಲ್ಲಿ ನಿಯಮದ ಕೃತ್ಯಗಳಿಂದ ನೀತಿವಂತರೆಂದು ನಿರ್ಣಯಿಸಲಾಗುವುದಿಲ್ಲ. ನಿಯಮದಿಂದ ಪಾಪದ ಪ್ರಜ್ಞೆ ಉಂಟಾಗುತ್ತದಷ್ಟೆ.
Explore ರೋಮಾಪುರದವರಿಗೆ 3:20
5
ರೋಮಾಪುರದವರಿಗೆ 3:10-12
ಪವಿತ್ರ ವೇದಗಳಲ್ಲಿ ಬರೆದಿರುವಂತೆ: “ನೀತಿವಂತನು ಇಲ್ಲ, ಒಬ್ಬನೂ ಇಲ್ಲ. ಅರ್ಥಮಾಡಿಕೊಳ್ಳುವವನು ಒಬ್ಬನೂ ಇಲ್ಲ. ದೇವರನ್ನು ಹುಡುಕುವವನು ಒಬ್ಬನೂ ಇಲ್ಲ. ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಲಸಕ್ಕೆ ಬಾರದವರಾಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ ಒಬ್ಬನಾದರೂ ಇಲ್ಲ.”
Explore ರೋಮಾಪುರದವರಿಗೆ 3:10-12
6
ರೋಮಾಪುರದವರಿಗೆ 3:28
ಏಕೆಂದರೆ ನಿಯಮವನ್ನು ಕೈಕೊಳ್ಳುವುದರಿಂದಲೇ. ನಂಬಿಕೆಯಿಂದಲೇ ಒಬ್ಬ ಮನುಷ್ಯನು ನೀತಿವಂತನೆಂದು ನಿರ್ಣಯ ಹೊಂದುತ್ತಾನೆಂದು ಎಣಿಸುತ್ತೇವೆ.
Explore ರೋಮಾಪುರದವರಿಗೆ 3:28
7
ರೋಮಾಪುರದವರಿಗೆ 3:4
ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”
Explore ರೋಮಾಪುರದವರಿಗೆ 3:4