1
ರೋಮಾಪುರದವರಿಗೆ 4:20-21
ಕನ್ನಡ ಸಮಕಾಲಿಕ ಅನುವಾದ
KSB
ಅವನು ದೇವರು ಮಾಡಿದ ವಾಗ್ದಾನಕ್ಕೆ ವಿರುದ್ಧ ಅಪನಂಬಿಕೆಯಿಂದ ಚಂಚಲಚಿತ್ತನಾಗದೆ, ನಂಬಿಕೆಯಿಂದ ಶಕ್ತಿವಂತನಾಗಿ ದೇವರಿಗೆ ಮಹಿಮೆಯನ್ನು ಸಲ್ಲಿಸಿದನು. ಅವನು ವಾಗ್ದಾನವನ್ನು ನೆರವೇರಿಸಲು ದೇವರು ಶಕ್ತರಾಗಿದ್ದಾರೆಂದು ಪೂರ್ಣ ದೃಢತೆಯುಳ್ಳವನಾದನು.
Compare
Explore ರೋಮಾಪುರದವರಿಗೆ 4:20-21
2
ರೋಮಾಪುರದವರಿಗೆ 4:17
“ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಒಬ್ಬ ತಂದೆಯನ್ನಾಗಿ ನೇಮಿಸಿದ್ದೇನೆ,” ಎಂದು ಪವಿತ್ರ ವೇದದಲ್ಲಿ ಲಿಖಿತವಾಗಿದೆ. ದೇವರು ಸತ್ತವರಿಗೆ ಜೀವಕೊಡುವವರೂ ಇಲ್ಲದವುಗಳನ್ನು ಇರುವವುಗಳೋ ಎಂಬಂತೆ ಕರೆಯುವವರೂ ಆಗಿರುತ್ತಾರೆಂದು ಅಬ್ರಹಾಮನು ದೇವರ ಸನ್ನಿಧಿಯಲ್ಲಿ ನಂಬಿದನು.
Explore ರೋಮಾಪುರದವರಿಗೆ 4:17
3
ರೋಮಾಪುರದವರಿಗೆ 4:25
ನಮ್ಮ ಪಾಪಗಳ ನಿಮಿತ್ತವಾಗಿ ಯೇಸುವನ್ನು ಮರಣಕ್ಕೆ ಒಪ್ಪಿಸಲಾಯಿತು ಮತ್ತು ನಮ್ಮನ್ನು ನೀತಿವಂತರನ್ನಾಗಿ ನಿರ್ಣಯಿಸಲು, ಜೀವದಿಂದ ಎಬ್ಬಿಸಲಾಯಿತು.
Explore ರೋಮಾಪುರದವರಿಗೆ 4:25
4
ರೋಮಾಪುರದವರಿಗೆ 4:18
ಅವನು ತನಗೆ ದೇವರಿಂದ ಹೇಳಲಾದ ನಿರೀಕ್ಷೆಗೆ ಯಾವ ಆಸ್ಪದವು ಇಲ್ಲದಿರುವಾಗಲೂ ನಿರೀಕ್ಷೆಯಿಂದ ನಂಬಿ, “ನಿನ್ನ ಸಂತಾನವು ನಕ್ಷತ್ರಗಳಷ್ಟು ಇರುವುದು,” ಎಂಬ ಹೇಳಿಕೆಯಂತೆ ಅವನು ಅನೇಕ ಜನಾಂಗಗಳಿಗೆ ತಂದೆಯಾದನು.
Explore ರೋಮಾಪುರದವರಿಗೆ 4:18
5
ರೋಮಾಪುರದವರಿಗೆ 4:16
ಆದ್ದರಿಂದ ಆ ಬಾಧ್ಯತೆಯು ಕೃಪೆಯಿಂದಲೇ, ನಂಬಿಕೆಯ ಮೂಲಕ ದೊರಕುತ್ತದೆ. ಈ ವಾಗ್ದಾನವು ನಿಯಮದ ಸಂತತಿಯವರಿಗೆ ಮಾತ್ರವಲ್ಲ ಅಬ್ರಹಾಮನಲ್ಲಿ ಇದ್ದ ನಂಬಿಕೆ ಇರುವವರ ಸಂತತಿಯವರೆಲ್ಲರಿಗೂ ಶಾಶ್ವತವಾಗಿ ದೊರಕುವುದು. ಏಕೆಂದರೆ ಅವನು ನಮ್ಮೆಲ್ಲರಿಗೂ ತಂದೆಯಾಗಿದ್ದಾನೆ.
Explore ರೋಮಾಪುರದವರಿಗೆ 4:16
6
ರೋಮಾಪುರದವರಿಗೆ 4:7-8
“ಯಾರ ಅಪರಾಧಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು. ಯಾರ ಪಾಪಗಳನ್ನು ಕರ್ತನು ಅವರ ಲೆಕ್ಕಕ್ಕೆ ಎಣಿಸುವುದಿಲ್ಲವೋ, ಆ ಮನುಷ್ಯನು ಧನ್ಯನು.”
Explore ರೋಮಾಪುರದವರಿಗೆ 4:7-8
7
ರೋಮಾಪುರದವರಿಗೆ 4:3
ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂದು ಹೇಳುತ್ತದೆ.
Explore ರೋಮಾಪುರದವರಿಗೆ 4:3