ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ. ಯೇಸುವಿನ ಮೂಲಕವೇ ನಾವು ಈಗ ಈ ಕೃಪೆಯಲ್ಲಿ ವಿಶ್ವಾಸದಿಂದ ಪ್ರವೇಶಮಾಡಿದ್ದೇವೆ. ಈ ಕೃಪೆಯಲ್ಲಿಯೇ ಈಗ ನಿಂತಿದ್ದೇವೆ. ನಾವು ದೇವರ ಮಹಿಮೆಯಲ್ಲಿ ಪಾಲುಗೊಳ್ಳುತ್ತೆವೆಂಬ ನಿರೀಕ್ಷೆಯಲ್ಲಿ ಆನಂದಪಡುತ್ತೇವೆ.