ಆದರೆ ನಮಗೆ ರಕ್ಷಕರೂ ದೇವರೂ ಆಗಿರುವ ಕ್ರಿಸ್ತ ಯೇಸುವಿನ ದಯೆಯೂ ಪ್ರೀತಿಯೂ ಮನುಷ್ಯರ ಕಡೆಗೆ ಪ್ರತ್ಯಕ್ಷವಾದಾಗ, ಅವರು ನಮ್ಮನ್ನು ರಕ್ಷಿಸಿದರು. ಹೇಗೆಂದರೆ, ನಾವು ಮಾಡಿದ ಪುಣ್ಯ ಕ್ರಿಯೆಗಳಿಂದಲ್ಲ, ಅವರ ಕರುಣೆಗೆ ಅನುಸಾರವಾಗಿ ಆತ್ಮಿಕವಾಗಿ ಹುಟ್ಟುವಂತೆ ಮಾಡಿ, ನಮ್ಮನ್ನು ತೊಳೆದೂ ಪವಿತ್ರಾತ್ಮ ದೇವರು ನೂತನ ಜೀವನವನ್ನು ಕೊಡುವುದರ ಮೂಲಕವೇ ಅವರು ನಮ್ಮನ್ನು ರಕ್ಷಿಸಿದರು. ನಮಗೆ ರಕ್ಷಕರಾದ ಕ್ರಿಸ್ತ ಯೇಸುವಿನ ಮೂಲಕ ದೇವರು ಪವಿತ್ರಾತ್ಮ ದೇವರನ್ನು ನಮ್ಮ ಮೇಲೆ ಸಮೃದ್ಧವಾಗಿ ಸುರಿಸಿದರು. ನಾವು ಅವರ ಕೃಪೆಯಿಂದ ನೀತಿವಂತರೆಂದು ನಿರ್ಣಯ ಹೊಂದಿ, ನಿತ್ಯಜೀವದ ನಿರೀಕ್ಷೆಗೆ ಅನುಸಾರವಾಗಿ ಬಾಧ್ಯರಾಗುವಂತೆ ಮಾಡಿದರು.