ಮತ್ತಾಯ 2:9-12
ಮತ್ತಾಯ 2:9-12 KANCLBSI
ಜ್ಯೋತಿಷಿಗಳು ಅರಸನ ಮಾತಿಗೆ ತಲೆಬಾಗಿ ಹೊರಟರು. ಪೂರ್ವದಿಕ್ಕಿನಲ್ಲಿ ಮೊದಲೇ ಅವರಿಗೆ ಕಾಣಿಸಿಕೊಂಡಿದ್ದ ನಕ್ಷತ್ರ ಪುನಃ ಕಾಣಿಸಿಕೊಂಡಿತು. ಅವರು ಪರಮಾನಂದಭರಿತರಾದರು. ಆ ನಕ್ಷತ್ರ ಅವರ ಮುಂದೆ ಮುಂದೆ ಸಾಗುತ್ತಾ ಮಗು ಇದ್ದ ಸ್ಥಳದ ಮೇಲೆ ಬಂದು ನಿಂತುಬಿಟ್ಟಿತು. ಜ್ಯೋತಿಷಿಗಳು ಆ ಮನೆಯನ್ನು ಪ್ರವೇಶಿಸಿ ಮಗುವನ್ನು ತಾಯಿ ಮರಿಯಳ ಬಳಿ ಕಂಡು ಅದಕ್ಕೆ ಸಾಷ್ಟಾಂಗವೆರಗಿ ಆರಾಧಿಸಿದರು. ತಮ್ಮ ತಮ್ಮ ಬೊಕ್ಕಸಗಳನ್ನು ಬಿಚ್ಚಿ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳ ಇವುಗಳನ್ನು ಮಗುವಿಗೆ ಪಾದಕಾಣಿಕೆಯಾಗಿ ಸಮರ್ಪಿಸಿದರು. ಹೆರೋದನ ಬಳಿಗೆ ಹಿಂದಿರುಗಬಾರದೆಂದು ಕನಸಿನಲ್ಲಿ ದೈವಾಜ್ಞೆಯಾದ್ದರಿಂದ, ಅವರು ಬೇರೆ ಮಾರ್ಗವಾಗಿ ತಮ್ಮ ದೇಶಕ್ಕೆ ಮರಳಿದರು.




![[From Heaven to the Hay in the Heart] Part 1 ಮತ್ತಾಯ 2:9-12 ಕನ್ನಡ ಸತ್ಯವೇದವು C.L. Bible (BSI)](/_next/image?url=https%3A%2F%2Fimageproxy.youversionapi.com%2Fhttps%3A%2F%2Fs3.amazonaws.com%2Fyvplans%2F29090%2F1440x810.jpg&w=3840&q=75)

