ಮತ್ತಾಯ 24:37-39
ಮತ್ತಾಯ 24:37-39 KANCLBSI
ನೋವನ ಕಾಲದಲ್ಲಿ ಆದಂತೆಯೇ ನರಪುತ್ರನು ಬರುವಾಗಲೂ ಆಗುವುದು. ಜಲಪ್ರಳಯಕ್ಕೆ ಹಿಂದಿನ ದಿನಗಳಲ್ಲಿ ನೋವನು ನಾವೆಯನ್ನು ಹತ್ತುವ ದಿನದವರೆಗೆ ಜನರು ತಿನ್ನುತ್ತಲೇ ಇದ್ದರು; ಕುಡಿಯುತ್ತಲೇ ಇದ್ದರು; ಮದುವೆ ಮಾಡಿಕೊಳ್ಳುವುದರಲ್ಲೂ ಮಾಡಿಕೊಡುವುದರಲ್ಲೂ ನಿರತರಾಗಿದ್ದರು. ಜಲಪ್ರಳಯ ಬಂದು ಅವರನ್ನು ಕೊಚ್ಚಿಕೊಂಡು ಹೋಗುವ ತನಕ ಅದರ ಅರಿವೇ ಅವರಿಗಿರಲಿಲ್ಲ. ನರಪುತ್ರನು ಆಗಮಿಸುವಾಗಲೂ ಹಾಗೆಯೇ ನಡೆಯುವುದು.





