YouVersion Logo
Search Icon

ಯೋಹಾ 12

12
ಮರಿಯಳು ಸುಗಂಧ ತೈಲವನ್ನು ಯೇಸುವಿನ ಪಾದಕ್ಕೆ ಹಚ್ಚಿದ್ದು
1 # 12:1 ಮತ್ತಾ 26:6-12; ಮಾರ್ಕ 14:3-8: ಪಸ್ಕ ಹಬ್ಬಕ್ಕೆ ಇನ್ನು ಆರು ದಿನಗಳು ಇರಲಾಗಿ ಯೇಸುವು, ಸತ್ತವರೊಳಗಿಂದ ಎಬ್ಬಿಸಿದ ಲಾಜರನು ವಾಸವಾಗಿದ್ದ ಬೇಥಾನ್ಯಕ್ಕೆ ಬಂದನು. 2ಯೇಸುವಿಗೆ ಅಲ್ಲಿ ಔತಣವನ್ನು ಏರ್ಪಡಿಸಿದ್ದರು. ಮಾರ್ಥಳು ಉಪಚಾರ ಮಾಡುತ್ತಿದ್ದಳು. ಲಾಜರನು ಆತನ ಜೊತೆಯಲ್ಲಿ ಊಟಕ್ಕೆ ಕುಳಿತಿದ್ದವರಲ್ಲಿ ಒಬ್ಬನಾಗಿದ್ದನು. 3ಆಗ ಮರಿಯಳು ಬಹು ಬೆಲೆಯುಳ್ಳ #12:3 ಸುಗಂಧದ್ರವ್ಯ, ನಾರ್ಡೊಸ್ಟಾಕಿಸ್ ಎಂಬ ಮೂಲಿಕೆಯಿಂದ ತಯಾರಿಸಲಾಗಿದೆ. ಸ್ವಚ್ಛ ಜಟಮಾಂಸಿ ತೈಲವನ್ನು #12:3 ಸುಮಾರು ಅರ್ಧ ಲೀಟರಿನಷ್ಟು. ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು. ಆ ತೈಲದ ಪರಿಮಳವು ಮನೆಯಲ್ಲೆಲ್ಲಾ ತುಂಬಿಕೊಂಡಿತ್ತು. 4ಆಗ ಆತನ ಶಿಷ್ಯರಲ್ಲಿ ಒಬ್ಬನು ಅಂದರೆ, ಆತನನ್ನು ಹಿಡಿದುಕೊಡುವುದಕ್ಕಿದ್ದ ಇಸ್ಕರಿಯೋತ ಯೂದನೆಂಬುವನು, 5“ಈ ತೈಲವನ್ನು ಮುನ್ನೂರು ಬೆಳ್ಳಿನಾಣ್ಯಕ್ಕೆ ಮಾರಿ ಬಡವರಿಗೆ ಕೊಡಬಹುದಿತ್ತಲ್ಲಾ?” ಎಂದನು. 6ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು. 7ಆಗ ಯೇಸುವು, “ಈಕೆಯನ್ನು ಬಿಟ್ಟುಬಿಡಿರಿ, ನನ್ನನ್ನು ಸಮಾಧಿ ಮಾಡುವ ದಿನಕ್ಕಾಗಿ ಈಕೆಯು ಇದನ್ನು ಇಟ್ಟುಕೊಂಡಿದ್ದಳು ಎಂದಿರಲಿ. 8ಬಡವರು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುತ್ತಾರೆ. ಆದರೆ ನಾನು ಯಾವಾಗಲೂ ನಿಮ್ಮ ಬಳಿಯಲ್ಲಿ ಇರುವುದಿಲ್ಲವಲ್ಲಾ” ಎಂದನು.
9ಯೆಹೂದ್ಯರ ಗುಂಪು ಆತನು ಅಲ್ಲಿ ಇದ್ದಾನೆಂದು ತಿಳಿದು, ಯೇಸುವನ್ನು ನೋಡುವುದಕ್ಕಾಗಿ ಮಾತ್ರವಲ್ಲದೆ, ಆತನು ಸತ್ತವರೊಳಗಿಂದ ಎಬ್ಬಿಸಿದ ಲಾಜರನನ್ನೂ ಸಹ ನೋಡಬೇಕೆಂಬುದಾಗಿ ಅಲ್ಲಿಗೆ ಬಂದರು. 10ಆದರೆ ಮುಖ್ಯಯಾಜಕರು ಲಾಜರನನ್ನೂ ಸಹ ಕೊಲ್ಲಬೇಕೆಂದು ಆಲೋಚಿಸಿದರು. 11ಏಕೆಂದರೆ ಅವನ ನಿಮಿತ್ತ ಅನೇಕ ಯೆಹೂದ್ಯರು ಯೇಸುವಿನಲ್ಲಿ ನಂಬಿಕೆಯಿಟ್ಟಿದ್ದರು.
ಯೇಸು ಯೆರೂಸಲೇಮಿನಲ್ಲಿ ಅರಸನಂತೆ ಪ್ರವೇಶಿಸಿದ್ದು
ಮತ್ತಾ 21:4-9; ಮಾರ್ಕ 11:7-10; ಲೂಕ 19:35-38
12ಮರುದಿನ ಹಬ್ಬಕ್ಕೆ ಬಂದಿದ್ದ ಜನರ ಗುಂಪು ಯೇಸು ಯೆರೂಸಲೇಮಿಗೆ ಬರುತ್ತಾನೆಂಬ ಸುದ್ದಿ ಕೇಳಿ 13ಖರ್ಜೂರದ ಗರಿಗಳನ್ನು ತೆಗೆದುಕೊಂಡು, ಆತನನ್ನು ಎದುರುಗೊಳ್ಳುವುದಕ್ಕೆ ಊರಿನಿಂದ ಹೊರಗೆ ಬಂದು, #12:13 ಮೂಲ: ಹೊಸನ್ನ, ಎಂದರೆ “ದೇವರು ನಮ್ಮನ್ನು ರಕ್ಷಿಸಲಿ” ಎಂದರ್ಥ. ಕೀರ್ತ 118:25, 26:“ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನಿಗೆ ಆಶೀರ್ವಾದ; ಇಸ್ರಾಯೇಲಿನ ಅರಸನಿಗೆ ಶುಭವಾಗಲಿ” ಎಂದು ಆರ್ಭಟಿಸಿದರು. 14ಯೇಸು ದಾರಿಯಲ್ಲಿ ಪ್ರಾಯದ ಕತ್ತೆಯೊಂದನ್ನು ಕಂಡು ಅದರ ಮೇಲೆ ಕುಳಿತುಕೊಂಡನು. 15ಹೀಗೆ, #12:15 ಜೆಕ. 9:9:“ಚೀಯೋನ್ ನಗರಿಯೇ, ಹೆದರಬೇಡ ಇಗೋ, ನಿನ್ನ ಅರಸನು ಕತ್ತೆಮರಿಯ ಮೇಲೆ ಕುಳಿತುಕೊಂಡು ಬರುತ್ತಿದ್ದಾನೆ” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. 16ಇದು ಆತನ ಶಿಷ್ಯರಿಗೆ ಮೊದಲು ತಿಳಿಯಲಿಲ್ಲ. ಆದರೆ ಯೇಸು ತನ್ನ ಮಹಿಮೆಯನ್ನು ಹೊಂದಿದ ಮೇಲೆ ಇದು ಆತನ ವಿಷಯವಾಗಿ ಬರೆದಿರುವಂತೆಯೇ, ಇವುಗಳನ್ನು ಆತನಿಗೆ ಮಾಡಿದೆವೆಂದೂ ನೆನಪು ಮಾಡಿಕೊಂಡರು. 17ಇದಲ್ಲದೆ ಆತನು ಲಾಜರನನ್ನು ಸಮಾಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರೇ ಈ ವಿಷಯಕ್ಕೆ ಸಾಕ್ಷಿಕೊಡುತ್ತಿದ್ದರು. 18ಆತನು ಈ ಸೂಚಕಕಾರ್ಯವನ್ನು ಮಾಡಿದನೆಂದು ಕೇಳಿದ ಕಾರಣದಿಂದಲೂ ಜನರು ಆತನನ್ನು ಸಂಧಿಸಲು ಬಂದರು. 19ಹೀಗಿರಲಾಗಿ ಫರಿಸಾಯರು, “ನಮ್ಮ ಯತ್ನವೇನೂ ನಡೆಯಲಿಲ್ಲ ನೋಡಿರಿ, ಲೋಕವೆಲ್ಲಾ ಆತನ ಹಿಂದೆ ಹೋಯಿತಲ್ಲಾ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
ಗ್ರೀಕರಿಗೂ ಯೇಸುವನ್ನು ಕಾಣುವ ಬಯಕೆ
20ಇದಲ್ಲದೆ ಆರಾಧನೆ ಮಾಡಬೇಕೆಂದು ಹಬ್ಬಕ್ಕೆ ಬಂದವರಲ್ಲಿ ಕೆಲವು ಮಂದಿ ಗ್ರೀಕರಿದ್ದರು. 21ಇವರು ಗಲಿಲಾಯದಲ್ಲಿರುವ ಬೇತ್ಸಾಯಿದ ಊರಿನ ಫಿಲಿಪ್ಪನ ಬಳಿಗೆ ಬಂದು, “ಅಯ್ಯಾ, ನಾವು ಯೇಸುವನ್ನು ನೋಡಬೇಕೆಂದಿದ್ದೇವೆಂದು” ಅವನನ್ನು ಬೇಡಿಕೊಂಡರು. 22ಫಿಲಿಪ್ಪನು ಬಂದು ಅಂದ್ರೆಯನಿಗೆ ಹೇಳಿದನು. ಅಂದ್ರೆಯನು ಹಾಗೂ ಫಿಲಿಪ್ಪನೂ ಬಂದು ಯೇಸುವಿಗೆ ಹೇಳಿದರು. 23ಆಗ ಯೇಸು ಅವರಿಗೆ, #12:23 ಯೋಹಾ 12:27; 17:1:“ಮನುಷ್ಯಕುಮಾರನು ಮಹಿಮೆ ಹೊಂದುವ ಗಳಿಗೆಯು ಬಂದಿದೆ. 24ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಗೋದಿಯ ಕಾಳು ಭೂಮಿಯಲ್ಲಿ ಬಿದ್ದು ಸಾಯದಿದ್ದರೆ ಒಂಟಿಯಾಗಿ ಉಳಿಯುವುದು. ಆದರೆ ಅದು ಸತ್ತರೆ ಬಹಳ ಫಲ ಕೊಡುವುದು 25#12:25 ಮತ್ತಾ 10:39; 16:25; ಮಾರ್ಕ 8:35; ಲೂಕ 9:24; 17:33:ತನ್ನ ಪ್ರಾಣವನ್ನು ಪ್ರೀತಿಸುವವನು ಅದನ್ನು ಕಳೆದುಕೊಳ್ಳುವನು. ಈ ಲೋಕದಲ್ಲಿ ತನ್ನ ಪ್ರಾಣವನ್ನು ಕಳೆದುಕೊಳ್ಳಲು ಹಿಂಜರಿಯದವನು ನಿತ್ಯಜೀವಕ್ಕಾಗಿ ಅದನ್ನು ಕಾಪಾಡಿಕೊಳ್ಳುವನು. 26ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನನ್ನು ಹಿಂಬಾಲಿಸಲಿ, ಮತ್ತು ಎಲ್ಲಿ ನಾನು ಇರುತ್ತೇನೋ ಅಲ್ಲಿ ನನ್ನ ಸೇವಕನೂ ಸಹ ಇರುವನು. ಯಾರಾದರೂ ನನ್ನ ಸೇವೆಯನ್ನು ಮಾಡುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು. 27ಈಗ ನನ್ನ ಪ್ರಾಣವು ತತ್ತರಿಸುತ್ತಿದೆ. ನಾನೇನು ಹೇಳಲಿ? ‘ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು.’ ಆದರೆ ಈ ಕಾರಣಕ್ಕಾಗಿಯೇ ಈ ಗಳಿಗೆಗೆ ಬಂದಿದ್ದೇನಲ್ಲಾ? 28ತಂದೆಯೇ ನಿನ್ನ ಹೆಸರನ್ನು ಮಹಿಮೆಪಡಿಸಿಕೋ” ಎಂದನು. ಅದಕ್ಕೆ, “ಮಹಿಮೆಪಡಿಸಿದ್ದೇನೆ ತಿರುಗಿ ಮಹಿಮೆಪಡಿಸುವೆನು” ಎಂಬ ಸ್ವರವು ಪರಲೋಕದಿಂದ ಬಂದಿತು. 29ಆಗ ಅಲ್ಲಿ ನಿಂತುಕೊಂಡಿದ್ದ ಜನರು ಅದನ್ನು ಕೇಳಿ, “ಗುಡುಗಿತು” ಎಂದರು. ಇನ್ನು ಕೆಲವರು “ದೇವದೂತನು ಈತನ ಸಂಗಡ ಮಾತನಾಡಿದನು” ಎಂದರು. 30ಯೇಸು ಅವರಿಗೆ, “ಈ ಶಬ್ದವು ನನಗಾಗಿ ಆಗಲಿಲ್ಲ, ನಿಮಗಾಗಿಯೇ ಆಯಿತು. 31#12:31 ಯೋಹಾ 16:11:ಈಗ ಈ ಲೋಕಕ್ಕೆ ನ್ಯಾಯತೀರ್ಪು ಆಗುತ್ತದೆ. #12:31 ಲೂಕ 10:18; ಎಫೆ 2:2:ಈಗ ಇಹಲೋಕಾಧಿಪತಿಯು ಹೊರಗೆ ನೂಕಲ್ಪಡುವನು 32ಆದರೆ #12:32 ಯೋಹಾ 3:14; 8:28:ನಾನು ಭೂಮಿಯಿಂದ ಮೇಲಕ್ಕೆ ಎಬ್ಬಿಸಲ್ಪಟ್ಟ ನಂತರ ಎಲ್ಲರನ್ನೂ ನನ್ನ ಬಳಿಗೆ ಸೆಳೆದುಕೊಳ್ಳುವೆನು” ಎಂದು ಹೇಳಿದನು. 33ತಾನು ಎಂಥಾ ಮರಣವನ್ನು ಹೊಂದುತ್ತೇನೆಂದು ಸೂಚಿಸಿ ಇದನ್ನು ಹೇಳಿದನು. 34ಅದಕ್ಕೆ ಆ ಜನರು, #12:34 ಕೀರ್ತ 89:36, 37; 110:4:“ಕ್ರಿಸ್ತನು ಸದಾಕಾಲ ಇರುತ್ತಾನೆಂದು ಧರ್ಮಶಾಸ್ತ್ರದಲ್ಲಿ ಕೇಳಿದ್ದೇವೆ. ಹಾಗಾದರೆ ಮನುಷ್ಯಕುಮಾರನು ಮೇಲಕ್ಕೆ ಎತ್ತಲ್ಪಡಬೇಕೆಂದು ನೀನು ಹೇಳುವುದು ಹೇಗೆ? ಈ ಮನುಷ್ಯಕುಮಾರನು ಯಾರು?” ಎಂದರು. 35ಆಗ ಯೇಸು ಅವರಿಗೆ, #12:35 ಯೋಹಾ 12:46; ಎಫೆ 5:8; ಯೆರೆ 13:16:“ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು. 36ನಿಮಗೆ ಬೆಳಕು ಇರುವಾಗಲೇ ಬೆಳಕನ್ನು ನಂಬಿರಿ. ನಂಬಿದರೆ ನೀವು ಬೆಳಕಿನ ಮಕ್ಕಳಾರಾಗುವಿರಿ” ಎಂದು ಹೇಳಿದನು. ಇದನ್ನು ಯೇಸು ಹೇಳಿದ ಮೇಲೆ ಅವರನ್ನು ಬಿಟ್ಟುಹೋಗಿ ಅಡಗಿಕೊಂಡನು.
ಯೆಹೂದ್ಯರ ಅಪನಂಬಿಕೆ
37ಯೇಸು ಅನೇಕ ಸೂಚಕಕಾರ್ಯಗಳನ್ನು ಅವರ ಎದುರಿನಲ್ಲಿ ಮಾಡಿದರೂ ಅವರು ಆತನನ್ನು ನಂಬಲಿಲ್ಲ. 38ಇದರಿಂದ, ಪ್ರವಾದಿಯಾದ ಯೆಶಾಯನು ನುಡಿದ ಮಾತು ನೆರವೇರಿತು, ಅದೇನೆಂದರೆ, #12:38 ಯೆಶಾ 53:1:“ಕರ್ತನೇ, ನಮ್ಮ ಉಪದೇಶವನ್ನು ಯಾರು ನಂಬಿದರು? ಕರ್ತನ #12:38 ಅಥವಾ, ತೋಳು. ಭುಜ ಬಲವು ಯಾರಿಗೆ ಗೋಚರವಾಯಿತು?” ಎಂಬುದೇ. 39ಅವರು ನಂಬಲಾರದೇ ಹೋದುದ್ದಕ್ಕೆ ಯೆಶಾಯನು ಮತ್ತೊಂದು ಮಾತಿನಲ್ಲಿ ಕಾರಣವನ್ನು ಸೂಚಿಸಿದ್ದಾನೆ, ಅದೇನೆಂದರೆ, 40#12:40 ಯೆಶಾ 6:9, 10:“ಅವರು ಕಣ್ಣಿನಿಂದ ಕಾಣದೆ, ಹೃದಯದಿಂದ ಗ್ರಹಿಸದೆ ಮತ್ತು ತಿರುಗಿಕೊಂಡು ನನ್ನಿಂದ ಹೇಗೂ ಸ್ವಸ್ಥತೆಯನ್ನು ಹೊಂದದೆ ಇರುವಂತೆ, ಆತನು ಅವರ ಕಣ್ಣುಗಳನ್ನು ಕುರುಡುಮಾಡಿ ಅವರ ಹೃದಯವನ್ನು ಕಠಿಣಮಾಡಿದನು” ಎಂಬುದೇ. 41#12:41 ಯೆಶಾ 6:1:ಯೆಶಾಯನು ಯೇಸುವಿನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯವಾಗಿ ಈ ಮಾತನ್ನು ಹೇಳಿದನು. 42ಆದರೂ ಹಿರೀಸಭೆಯವರಲ್ಲಿಯೂ ಸಹ ಅನೇಕರು ಆತನನ್ನು ನಂಬಿದರು, ಆದರೆ ತಮಗೆ ಸಭೆಯಿಂದ ಬಹಿಷ್ಕಾರವಾದೀತೆಂದು, ಫರಿಸಾಯರ ನಿಮಿತ್ತ ಅವರು ಬಹಿರಂಗವಾಗಿ ಅದನ್ನು ಜನರ ಮುಂದೆ ಅರಿಕೆಮಾಡಿಕೊಳ್ಳಲಿಲ್ಲ. 43ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರಿಂದ ಬರುವ ಹೊಗಳಿಕೆ ಅವರಿಗೆ ಇಷ್ಟವಾಗಿತ್ತು.
44ಯೇಸು ಕೂಗಿ ಹೇಳಿದ ಮಾತೇನಂದರೆ, “ನನ್ನನ್ನು ನಂಬುವವನು ನನ್ನನ್ನೇ ನಂಬುವವನಲ್ಲದೇ ನನ್ನನ್ನು ಕಳುಹಿಸಿಕೊಟ್ಟಾತನನ್ನು ಸಹ ನಂಬುವವನಾಗಿದ್ದಾನೆ. 45ಮತ್ತು ನನ್ನನ್ನು ನೋಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನು ನೋಡುವವನಾಗಿದ್ದಾನೆ. 46ನನ್ನನ್ನು ನಂಬುವ ಒಬ್ಬನಾದರೂ ಕತ್ತಲಲ್ಲಿ ಇರಬಾರದೆಂದು, ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ. 47ಯಾರಾದರೂ ನನ್ನ ಮಾತುಗಳನ್ನು ಕೇಳಿದರೂ ಅದನ್ನು ಕೈಕೊಂಡು ನಡೆಯದೆ ಹೋದರೆ, ನಾನು ಅವನಿಗೆ ತೀರ್ಪುಮಾಡುವುದಿಲ್ಲ. ಲೋಕಕ್ಕೆ ತೀರ್ಪುಮಾಡುವುದಕ್ಕಾಗಿ ನಾನು ಬಂದಿಲ್ಲ, ಆದರೆ ಲೋಕವನ್ನು ರಕ್ಷಿಸುವುದಕ್ಕಾಗಿ ಬಂದಿದ್ದೇನಷ್ಟೇ. 48ನನ್ನನ್ನು ತಿರಸ್ಕರಿಸಿ ನನ್ನ ಮಾತುಗಳನ್ನು ಸ್ವೀಕರಿಸದೆ ಇರುವವನಿಗೆ ತೀರ್ಪುಮಾಡುವಂಥದ್ದು ಒಂದು ಇದೆ. ಅದು ನಾನು ಆಡುವ ಮಾತೇ, ಕಡೆಯ ದಿನದಲ್ಲಿ ಅದೇ ಅವನಿಗೆ ತೀರ್ಪುಮಾಡುವುದು. 49ಏಕೆಂದರೆ ಇದನ್ನು ನನ್ನಷ್ಟಕ್ಕೆ ನಾನೇ ಮಾತನಾಡುತ್ತಿಲ್ಲ. ನನ್ನನ್ನು ಕಳುಹಿಸಿ ಕೊಟ್ಟ ತಂದೆಯೇ, ನಾನು ಏನು ಹೇಳಬೇಕು ಮತ್ತು ಹೇಗೆ ಮಾತನಾಡಬೇಕು, ಎಂಬುದಾಗಿ ನನಗೆ ಆಜ್ಞಾಪಿಸಿದ್ದಾನೆ. 50ಆತನ ಆಜ್ಞೆಯು ನಿತ್ಯಜೀವವಾಗಿದೆ ಎಂದು ನಾನು ಬಲ್ಲೆನು; ಆದುದರಿಂದ ನಾನು ಮಾತನಾಡುವುದನ್ನೆಲ್ಲಾ ತಂದೆ ನನಗೆ ಹೇಳಿದ ಮೇರೆಗೆ ಮಾತನಾಡುತ್ತಿದ್ದೇನೆ” ಎಂದನು.

Currently Selected:

ಯೋಹಾ 12: IRVKan

Highlight

Share

Copy

None

Want to have your highlights saved across all your devices? Sign up or sign in

YouVersion uses cookies to personalize your experience. By using our website, you accept our use of cookies as described in our Privacy Policy