YouVersion Logo
Search Icon

ಮತ್ತಾ 14

14
ಹೆರೋದನು ಸ್ನಾನಿಕನಾದ ಯೋಹಾನನ್ನು ಕೊಲ್ಲಿಸಿದ ಮೇಲೆ ಯೇಸುವಿನ ಸುದ್ದಿಯನ್ನು ಕೇಳಿ ದಿಗಿಲುಪಟ್ಟದ್ದು
ಮಾರ್ಕ 6:14-29; ಲೂಕ 9:7-9
1ಆ ಕಾಲದಲ್ಲಿ #14:1 ರೋಮಾನ್ ಚಕ್ರಾಧಿಪತ್ಯದಲ್ಲಿ ದೇಶದ ಅಥವಾ ಪ್ರಾಂತ್ಯದ ನಾಲ್ಕನೆಯ ಒಂದು ಭಾಗದ ಅಧಿಪತಿ. ಉಪರಾಜನಾದ ಹೆರೋದನು ಯೇಸುವಿನ ಸುದ್ದಿಯನ್ನು ಕೇಳಿ, 2ತನ್ನ ಸೇವಕರಿಗೆ, “ಇವನು ಸ್ನಾನಿಕ ಯೋಹಾನನೇ; ಸತ್ತವರೊಳಗಿಂದ ಎದ್ದು ಬಂದಿದ್ದಾನೆ. ಆದಕಾರಣ ಮಹತ್ಕಾರ್ಯಗಳನ್ನು ನಡಿಸುವ ಶಕ್ತಿಗಳು ಅವನಲ್ಲಿ ಇದೆ” ಎಂದು ಹೇಳಿದನು. 3ಹೆರೋದನು ತನ್ನ ಅಣ್ಣನಾದ ಫಿಲಿಪ್ಪನ ಹೆಂಡತಿಯಾದ ಹೆರೋದ್ಯಳ ನಿಮಿತ್ತ ಯೋಹಾನನನ್ನು ಹಿಡಿದು ಕಟ್ಟಿಸಿ ಸೆರೆಮನೆಯಲ್ಲಿ ಹಾಕಿಸಿದ್ದನು. 4ಯೋಹಾನನು ಹೆರೋದನಿಗೆ “ನೀನು ಇವಳನ್ನು ಹೆಂಡತಿಯಾಗಿ ಇಟ್ಟುಕೊಂಡಿರುವುದು ನ್ಯಾಯವಲ್ಲವೆಂದು” ಹೇಳುತ್ತಿದ್ದನು. 5ಹೆರೋದನು ಅವನನ್ನು ಕೊಲ್ಲಿಸಬೇಕೆಂದಿದ್ದರೂ ಜನರಿಗೆ ಭಯಪಟ್ಟನು, ಏಕೆಂದರೆ ಅವರು ಅವನನ್ನು ಪ್ರವಾದಿಯೆಂದು ಎಣಿಸಿದ್ದರು. 6ಆದರೆ ಹೆರೋದನ ಹುಟ್ಟಿದ ದಿನದ ಹಬ್ಬವು ನಡೆಯುವಾಗ ಹೆರೋದ್ಯಳ ಮಗಳು ಬಂದಿದ್ದ ಅತಿಥಿಗಳ ಮುಂದೆ ನೃತ್ಯಮಾಡಿ ಹೆರೋದನನ್ನು ಮೆಚ್ಚಿಸಿದಳು. 7ಅವನು ಅವಳಿಗೆ, ನೀನು ಏನು ಕೇಳಿಕೊಂಡರೂ ಕೊಡುತ್ತೇನೆಂದು ಆಣೆಯಿಟ್ಟು ವಾಗ್ದಾನ ಮಾಡಿದನು. 8ಅವಳು ತನ್ನ ತಾಯಿಯ ಪ್ರೇರೇಪಣೆಗೆ ಒಳಗಾಗಿ, “ಸ್ನಾನಿಕ ಯೋಹಾನನ ತಲೆಯನ್ನು ಹರಿವಾಣದಲ್ಲಿ ನನಗೆ ತರಿಸಿಕೊಡು” ಅಂದಳು. 9ಆಕೆಯ ಕೋರಿಕೆಯಿಂದ ಅರಸನು ದುಃಖಪಟ್ಟರೂ ತಾನು ಮಾಡಿದ ಆಣೆಯ ನಿಮಿತ್ತವಾಗಿಯೂ, ತನ್ನ ಸಂಗಡ ಊಟಕ್ಕೆ ಕುಳಿತಿದ್ದವರ ನಿಮಿತ್ತವಾಗಿಯೂ ಅದನ್ನು ತಂದುಕೊಡುವುದಕ್ಕೆ ಅಪ್ಪಣೆ ಕೊಟ್ಟನು. 10ಅವನು ಆಳುಗಳನ್ನು ಕಳುಹಿಸಿ ಸೆರೆಮನೆಯಲ್ಲಿ ಯೋಹಾನನ ಶಿರಚ್ಛೇದನಮಾಡಿ, 11ಅವರು ಅವನ ತಲೆಯನ್ನು ಹರಿವಾಣದಲ್ಲಿ ತಂದು ಆ ಹುಡುಗಿಗೆ ಕೊಟ್ಟರು. ಅವಳು ಅದನ್ನು ತನ್ನ ತಾಯಿಯ ಬಳಿಗೆ ತೆಗೆದುಕೊಂಡು ಹೋದಳು. 12ಯೋಹಾನನ ಶಿಷ್ಯರು ಬಂದು ಅವನ ದೇಹವನ್ನು ಹೊತ್ತುಕೊಂಡು ಹೋಗಿ ಹೂಣಿಟ್ಟರು. ಅನಂತರ ಯೇಸುವಿನ ಬಳಿಗೆ ಬಂದು ತಿಳಿಸಿದರು.
ಯೇಸು ಐದು ಸಾವಿರ ಜನರಿಗೆ ಊಟ ಮಾಡಿಸಿದ್ದು
ಮಾರ್ಕ 6:30-44; ಲೂಕ 9:10-17; ಯೋಹಾ 6:1-14
13ಯೇಸು ಅದನ್ನು ಕೇಳಿ ದೋಣಿಯನ್ನು ಹತ್ತಿ ಆ ಸ್ಥಳವನ್ನು ಬಿಟ್ಟು ಅಡವಿಯ ಸ್ಥಳಕ್ಕೆ ಹೋದನು. ಇದನ್ನು ಕೇಳಿದ ಜನರು ಗುಂಪು ಗುಂಪಾಗಿ ತಮ್ಮ ತಮ್ಮ ಪಟ್ಟಣಗಳಿಂದ ಕಾಲುನಡಿಗೆಯಿಂದ ಆತನನ್ನು ಹಿಂಬಾಲಿಸಿದರು. 14ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು. 15ಸಂಜೆಯಾದಾಗ ಶಿಷ್ಯರು ಆತನ ಬಳಿಗೆ ಬಂದು, “ಇದು ಅಡವಿಯ ಸ್ಥಳ ಈಗ ಹೊತ್ತು ಮುಳುಗಿಹೋಯಿತು. ಅವರು ಹಳ್ಳಿಗಳಿಗೆ ಹೋಗಿ ತಮಗಾಗಿ ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವಂತೆ ಕಳುಹಿಸಿಕೊಡು” ಎಂದು ಹೇಳಿದರು. 16ಆದರೆ ಯೇಸು, “ಅವರು ಹೋಗುವ ಅಗತ್ಯವಿಲ್ಲ. ನೀವೇ ಅವರಿಗೆ ಊಟಕ್ಕೆ ಏನಾದರೂ ಕೊಡಿರಿ” ಅಂದನು. 17ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ, 18ಆತನು, “ಅವುಗಳನ್ನು ನನಗೆ ತಂದು ಕೊಡಿರಿ” ಅಂದನು. 19ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು. 20ಅವರೆಲ್ಲರೂ ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. 21ಊಟಮಾಡಿದವರು ಹೆಂಗಸರೂ ಮಕ್ಕಳನ್ನು ಬಿಟ್ಟು ಗಂಡಸರೇ ಸುಮಾರು ಐದು ಸಾವಿರವಿದ್ದರು.
ಯೇಸು ಸಮುದ್ರದ ಮೇಲೆ ನಡೆದದ್ದು
ಮಾರ್ಕ 6:45-52; ಯೋಹಾ 6:15-21
22ಇದಾದ ಕೂಡಲೆ ಆತನು ತನ್ನ ಶಿಷ್ಯರಿಗೆ ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ನನಗೆ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಒತ್ತಾಯ ಮಾಡಿದನು. 23ಆತನು ಜನರ ಗುಂಪುಗಳನ್ನು ಕಳುಹಿಸಿಬಿಟ್ಟ ಮೇಲೆ #14:23 ಲೂಕ 6:12; 9:18, 28; 11:1. ಪ್ರಾರ್ಥನೆ ಮಾಡುವುದಕ್ಕಾಗಿ ಏಕಾಂಗಿಯಾಗಿ ಬೆಟ್ಟವನ್ನು ಹತ್ತಿದನು. ಮತ್ತು ಸಂಜೆಯಾದಾಗ ಆತನೊಬ್ಬನೇ ಅಲ್ಲಿ ಇದ್ದನು. 24ಆದರೆ ದೋಣಿಯು #14:24 ಮೂಲ: ಅನೇಕ ಸ್ತಾದ್ಯ, ಅಂದರೆ ಫರ್ಲಾಂಗು, ದೂರ. ಕೆಲವು ಪ್ರತಿಗಳಲ್ಲಿ, ಭೂಮಿಗೆ ಬಹು ದೂರ ಹೋಗಿತ್ತು ಎಂದು ಬರೆದದೆಸಮುದ್ರದ ನಡುವೆಯಿತ್ತು, ಎದುರು ಗಾಳಿ ಬೀಸುತ್ತಿದ್ದುದರಿಂದ ಅಲೆಗಳ ಬಡಿತಕ್ಕೆ ಸಿಕ್ಕಿ ಹೊಯ್ದಾಡುತ್ತಿತ್ತು. 25ರಾತ್ರಿಯ ನಾಲ್ಕನೆಯ ಜಾವದಲ್ಲಿ ಯೇಸು ಸಮುದ್ರದ ಮೇಲೆ ನಡೆಯುತ್ತಾ ಅವರ ಕಡೆಗೆ ಬಂದನು. 26ಸಮುದ್ರದ ಮೇಲೆ ನಡೆಯುವ ಆತನನ್ನು ನೋಡಿದ ಶಿಷ್ಯರು “ಭೂತವೆಂದು” ದಿಗಿಲುಬಿದ್ದು ಭಯದಿಂದ ಕೂಗಿದರು. 27ಕೂಡಲೆ ಯೇಸು ಮಾತನಾಡಿ ಅವರಿಗೆ, “ಧೈರ್ಯವಾಗಿರಿ ನಾನೇ ಭಯಪಡಬೇಡಿರಿ” ಎಂದು ಹೇಳಿದನು. 28ಅದಕ್ಕೆ ಪೇತ್ರನು, “ಕರ್ತನೇ ನೀನೇ ಆದರೆ ನಾನು ನೀರಿನ ಮೇಲೆ ನಡೆದು ನಿನ್ನ ಬಳಿಗೆ ಬರುವುದಕ್ಕೆ ಅಪ್ಪಣೆ ಕೊಡು” ಅನ್ನಲು, 29ಆತನು, “ಬಾ” ಅಂದನು. ಆಗ ಪೇತ್ರನು ಯೇಸುವಿನ ಬಳಿಗೆ ಹೋಗುವುದಕ್ಕೆ ದೋಣಿಯಿಂದ ಇಳಿದು ನೀರಿನ ಮೇಲೆ ನಡೆದನು. 30ಆದರೆ ಅವನು ಗಾಳಿಯನ್ನು ನೋಡಿದಾಗ ಭಯಪಟ್ಟು ಮುಳುಗಲಾರಂಭಿಸಿದಾಗ, “ಕರ್ತನೇ, ನನ್ನನ್ನು ಕಾಪಾಡು” ಎಂದು ಕೂಗಿಕೊಂಡನು. 31ತಕ್ಷಣವೇ ಯೇಸು ಕೈಚಾಚಿ ಅವನನ್ನು ಹಿಡಿದು, “ಅಲ್ಪ ವಿಶ್ವಾಸಿಯೇ ಏಕೆ ಸಂದೇಹ ಪಟ್ಟೆ” ಎಂದು ಹೇಳಿದನು. 32ತರುವಾಯ ಅವರು ದೋಣಿಯನ್ನು ಹತ್ತಿದ ಮೇಲೆ ಗಾಳಿ ನಿಂತು ಹೋಯಿತು. 33ಆಗ ದೋಣಿಯಲ್ಲಿದ್ದ ಶಿಷ್ಯರು #14:33 ಮತ್ತಾ 8:29; 16:16; ಮಾರ್ಕ 1:1; ಲೂಕ 1:35; ಕೀರ್ತ 2:7:“ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
34ಅವರು ಸಮುದ್ರವನ್ನು ದಾಟಿ ಗೆನೆಜರೇತ್ ಪಟ್ಟಣದ ದಡಕ್ಕೆ ಬಂದರು. 35ಆ ಸ್ಥಳದ ಜನರು ಆತನ ಗುರುತನ್ನು ಹಿಡಿದು ಆ ಸುತ್ತಲಿನ ಸೀಮೆಗೆಲ್ಲಾ ಹೇಳಿ ಕಳುಹಿಸಿದರು ಮತ್ತು ಅವರು ಅಸ್ವಸ್ಥರಾದವರೆಲ್ಲರನ್ನು ಆತನ ಬಳಿಗೆ ಕರೆತಂದರು. 36ಅವರು ಆತನನ್ನು #14:36 ಮತ್ತಾ 9:20; ಲೂಕ 6:19:ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.

Currently Selected:

ಮತ್ತಾ 14: IRVKan

Highlight

Share

Copy

None

Want to have your highlights saved across all your devices? Sign up or sign in

YouVersion uses cookies to personalize your experience. By using our website, you accept our use of cookies as described in our Privacy Policy