ಯೆಹೋಶುವನು 4:21-23
ಯೆಹೋಶುವನು 4:21-23 KERV
ಅನಂತರ ಯೆಹೋಶುವನು ಜನರಿಗೆ, “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು ನಿಮ್ಮನ್ನು, ‘ಈ ಕಲ್ಲುಗಳು ಏನು ಸೂಚಿಸುತ್ತವೆ?’ ಎಂದು ಕೇಳುವಾಗ ನೀವು ಹೀಗೆ ಹೇಳಬೇಕು: ‘ಇಸ್ರೇಲಿನ ಜನರು ಜೋರ್ಡನ್ ನದಿಯನ್ನು ಒಣನೆಲದ ಮೇಲೆ ಹೇಗೆ ದಾಟಿದರು ಎಂಬುದನ್ನು ನಮ್ಮ ನೆನಪಿಗೆ ತರಲು ಈ ಕಲ್ಲುಗಳು ಸಹಾಯಕವಾಗಿವೆ.’ ನಿಮ್ಮ ದೇವರಾದ ಯೆಹೋವನು ಜೋರ್ಡನ್ ನದಿಯ ನೀರಿನ ಚಲನೆಯನ್ನು ನಿಲ್ಲಿಸಿದನು. ಕೆಂಪುಸಮುದ್ರದ ಹಾಗೆ ಈ ನದಿಯೂ ಸಹ ಜನರೆಲ್ಲರೂ ದಾಟುವವರೆಗೆ ಬತ್ತಿಹೋಗಿತ್ತು. ಜನರು ದಾಟಲು ಸಾಧ್ಯವಾಗುವಂತೆ ಕೆಂಪುಸಮುದ್ರದ ನೀರಿನ ಚಲನೆಯನ್ನು ಸಹ ಯೆಹೋವನು ತಡೆದಿದ್ದನೆಂಬುದನ್ನು ಸ್ಮರಿಸಿಕೊಳ್ಳಿ ಎಂದು ನೀವು ಮಕ್ಕಳಿಗೆ ಹೇಳಬೇಕು.





