Logo YouVersion
Ikona vyhledávání

ಹಗ್ಗಾಯ 1

1
ಯೆಹೋವ ದೇವರ ಆಲಯ ಕಟ್ಟಲು ಕರೆ
1ಪಾರಸಿಯ ಅರಸ ದಾರ್ಯಾವೆಷನ ಆಳಿಕೆಯ ಎರಡನೆಯ ವರ್ಷದಲ್ಲಿ, ಆರನೇ ತಿಂಗಳಿನ ಮೊದಲನೇ ದಿವಸದಲ್ಲಿ, ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮುಖಾಂತರ, ಶೆಯಲ್ತಿಯೇಲನ ಮಗನು ಮತ್ತು ಯೆಹೂದದ ಅಧಿಪತಿ ಆದ ಜೆರುಬ್ಬಾಬೆಲನಿಗೂ ಯೆಹೋಚಾದಾಕನ ಮಗನು ಮತ್ತು ಮಹಾಯಾಜಕನಾದ ಯೆಹೋಶುವನಿಗೂ ಬಂದಿತು:
2“ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಯೆಹೋವ ದೇವರ ಆಲಯವನ್ನು ಕಟ್ಟುವ ಕಾಲವು ಇನ್ನೂ ಬಂದಿಲ್ಲ,’ ಎಂದು ಈ ಜನರು ಅಂದುಕೊಳ್ಳುತ್ತಾರೆ.”
3ಆಗ ಯೆಹೋವ ದೇವರ ವಾಕ್ಯವು ಪ್ರವಾದಿಯಾದ ಹಗ್ಗಾಯನ ಮೂಲಕ ಬಂದಿತು: 4“ಈ ಆಲಯ ಹಾಳುಬಿದ್ದಿರುವಾಗ, ನೀವು, ನಿಮ್ಮ ಚಿತ್ರ ಹಲಗೆಗಳುಳ್ಳ ಮನೆಗಳಲ್ಲಿ ವಾಸಮಾಡುವುದಕ್ಕೆ ಇದು ನಿಮಗೆ ಕಾಲವೋ?”
5ಈಗ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ. 6ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”
7ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ನಿಮ್ಮ ಮಾರ್ಗಗಳನ್ನು ಆಲೋಚಿಸಿ ನೋಡಿರಿ. 8ಬೆಟ್ಟಕ್ಕೆ ಹೋಗಿ ಮರವನ್ನು ತಂದು, ಆಲಯವನ್ನು ಕಟ್ಟಿರಿ. ಆಗ ನಾನು ಅದಕ್ಕೆ ಮೆಚ್ಚಿ, ಮಹಿಮೆ ಹೊಂದುವೆನೆಂದು, ಯೆಹೋವ ದೇವರು ಹೇಳುತ್ತಾರೆ. 9ಬಹಳ ಆಗಬೇಕೆಂದು ನೋಡಿಕೊಂಡಿರಿ. ಆದರೆ ಇದೋ ಕೊಂಚವು. ನೀವು ಇದನ್ನು ಮನೆಗೆ ತಂದಾಗ, ನಾನು ಅದರ ಮೇಲೆ ಊದಿ ಬಿಟ್ಟೆನು. ಏತಕ್ಕೆ ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. ನನ್ನ ಆಲಯವು ಹಾಳುಬಿದ್ದಿರುವಾಗ, ನೀವು ನಿಮ್ಮ ನಿಮ್ಮ ಸ್ವಂತ ಮನೆಗಳ ಕಡೆಗೆ ಹೆಚ್ಚು ಗಮನ ಕೊಡುತ್ತೀರಿ. 10ಆದ್ದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. 11ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆಯೂ ಎಣ್ಣೆಯ ಮೇಲೆಯೂ ಭೂಮಿಯ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ಪಶುಗಳ ಮೇಲೆಯೂ ಕೈಕಸುಬುಗಳ ಮೇಲೆಯೂ ಬರಗಾಲವನ್ನು ತಂದಿದ್ದೇನೆ.”
12ಆಗ ಶೆಯಲ್ತಿಯೇಲನ ಮಗ ಜೆರುಬ್ಬಾಬೆಲನೂ ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನೂ ಜನರಲ್ಲಿ ಉಳಿದವರೆಲ್ಲರೂ ತಮ್ಮ ದೇವರಾದ ಯೆಹೋವ ದೇವರ ಮಾತನ್ನೂ ತಮ್ಮ ದೇವರಾದ ಯೆಹೋವ ದೇವರು ಕಳುಹಿಸಿದ ಪ್ರವಾದಿಯಾದ ಹಗ್ಗಾಯನ ಮಾತುಗಳನ್ನೂ ಕೇಳಿದರು. ಜನರು ಯೆಹೋವ ದೇವರಿಗೆ ಭಯಪಟ್ಟರು.
13ಆಗ ಯೆಹೋವ ದೇವರ ಸೇವಕನಾದ ಹಗ್ಗಾಯನು, ಯೆಹೋವ ದೇವರ ಜನರಿಗೆ, “ನಾನು ನಿಮ್ಮ ಸಂಗಡ ಇದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. 14-15ಯೆಹೋವ ದೇವರು ಶೆಯಲ್ತಿಯೇಲನ ಮಗ ಮತ್ತು ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನ ಆತ್ಮವನ್ನೂ, ಯೆಹೋಚಾದಾಕನ ಮಗ ಮತ್ತು ಮಹಾಯಾಜಕ ಯೆಹೋಶುವನ ಆತ್ಮವನ್ನೂ, ಜನರಲ್ಲಿ ಉಳಿದವರೆಲ್ಲರ ಆತ್ಮವನ್ನೂ ಪ್ರೇರೇಪಿಸಿದರು. ಅವರು ಬಂದು ಅರಸನಾದ ದಾರ್ಯಾವೆಷನ ಆಳಿಕೆಯ ಎರಡನೇ ವರ್ಷದ, ಆರನೆಯ ತಿಂಗಳಿನ, ಇಪ್ಪತ್ನಾಲ್ಕನೆಯ ದಿವಸದಲ್ಲಿ ತಮ್ಮ ದೇವರಾದ ಸೇನಾಧೀಶ್ವರ ಯೆಹೋವ ದೇವರ ಆಲಯದ ಕೆಲಸ ಪ್ರಾರಂಭಿಸಿದರು.
ದೇವಾಲಯದ ಮುಂದಿನ ವೈಭವದ ವಾಗ್ದಾನ
ಅರಸನಾದ ದಾರ್ಯಾವೆಷನ ಎರಡನೇ ವರ್ಷದಲ್ಲಿ,

Zvýraznění

Kopírovat

Porovnat

Sdílet

None

Chceš mít své zvýrazněné verše uložené na všech zařízeních? Zaregistruj se nebo se přihlas