1
ಮತ್ತಾಯನ ಸುವಾರ್ತೆ 7:7
ಪರಿಶುದ್ದ ಬೈಬಲ್
KERV
“ಬೇಡಿಕೊಳ್ಳಿರಿ, ಆಗ ದೇವರು ನಿಮಗೆ ಕೊಡುತ್ತಾನೆ. ಹುಡುಕಿರಿ, ಆಗ ನೀವು ಕಂಡುಕೊಳ್ಳುವಿರಿ. ಬಾಗಿಲು ತಟ್ಟಿರಿ, ಆಗ ಅದು ನಿಮಗೆ ತೆರೆಯುವುದು.
Konpare
Eksplore ಮತ್ತಾಯನ ಸುವಾರ್ತೆ 7:7
2
ಮತ್ತಾಯನ ಸುವಾರ್ತೆ 7:8
ಹೌದು, ಕೇಳುತ್ತಲೇ ಇರುವವನು ಪಡೆದುಕೊಳ್ಳುತ್ತಾನೆ, ಹುಡುಕುತ್ತಲೇ ಇರುವವನು ಕಂಡುಕೊಳ್ಳುತ್ತಾನೆ, ತಟ್ಟುತ್ತಲೇ ಇರುವವನಿಗೆ ಬಾಗಿಲು ತೆರೆಯುತ್ತದೆ.
Eksplore ಮತ್ತಾಯನ ಸುವಾರ್ತೆ 7:8
3
ಮತ್ತಾಯನ ಸುವಾರ್ತೆ 7:24
“ನನ್ನ ಈ ಮಾತುಗಳನ್ನು ಕೇಳಿ ಅವುಗಳಿಗೆ ವಿಧೇಯನಾಗಿರುವ ಪ್ರತಿಯೊಬ್ಬನೂ ತನ್ನ ಮನೆಯನ್ನು ಬಂಡೆಯ ಮೇಲೆ ಕಟ್ಟಿದ ಬುದ್ಧಿವಂತನಿಗೆ ಹೋಲಿಕೆಯಾಗಿದ್ದಾನೆ.
Eksplore ಮತ್ತಾಯನ ಸುವಾರ್ತೆ 7:24
4
ಮತ್ತಾಯನ ಸುವಾರ್ತೆ 7:12
“ನಿಮಗೆ ಬೇರೆಯವರು ಏನನ್ನು ಮಾಡಬೇಕೆಂದು ನೀವು ಆಶಿಸುತ್ತೀರೋ ಅಂಥವುಗಳನ್ನೇ ನೀವು ಅವರಿಗೆ ಮಾಡಿರಿ. ಇದು ಮೋಶೆಯ ಧರ್ಮಶಾಸ್ತ್ರದ ಮತ್ತು ಪ್ರವಾದಿಗಳ ಬೋಧನೆಯ ಸಾರಾಂಶ.
Eksplore ಮತ್ತಾಯನ ಸುವಾರ್ತೆ 7:12
5
ಮತ್ತಾಯನ ಸುವಾರ್ತೆ 7:14
ಆದರೆ ನಿತ್ಯಜೀವಕ್ಕಿರುವ ಬಾಗಿಲು ಬಹಳ ಚಿಕ್ಕದು, ದಾರಿ ಕಷ್ಟಕರ. ಕೆಲವರು ಮಾತ್ರ ಆ ಮಾರ್ಗವನ್ನು ಕಂಡುಕೊಳ್ಳುವರು.
Eksplore ಮತ್ತಾಯನ ಸುವಾರ್ತೆ 7:14
6
ಮತ್ತಾಯನ ಸುವಾರ್ತೆ 7:13
“ಇಕ್ಕಟ್ಟಾದ ಬಾಗಿಲಿನ ಮೂಲಕ ಪರಲೋಕರಾಜ್ಯವನ್ನು ಪ್ರವೇಶಿಸಿರಿ. ನರಕಕ್ಕೆ ಹೋಗುವ ದಾರಿ ದೊಡ್ಡದು, ಬಾಗಿಲು ಬಹಳ ವಿಶಾಲ. ಅನೇಕ ಜನರು ಆ ಬಾಗಿಲಲ್ಲಿ ಪ್ರವೇಶಿಸುತ್ತಾರೆ.
Eksplore ಮತ್ತಾಯನ ಸುವಾರ್ತೆ 7:13
7
ಮತ್ತಾಯನ ಸುವಾರ್ತೆ 7:11
ನೀವು ದೇವರಂತೆ ಒಳ್ಳೆಯವರಲ್ಲ, ಕೆಟ್ಟವರು. ಆದರೂ ನಿಮ್ಮ ಮಕ್ಕಳಿಗೆ ಒಳ್ಳೆಯ ವಸ್ತುಗಳನ್ನು ಕೊಡಬೇಕೆಂಬುದು ನಿಮಗೆ ತಿಳಿದಿದೆ. ಹೀಗಿರಲಾಗಿ ಪರಲೋಕದ ನಿಮ್ಮ ತಂದೆಯು ಸಹ ತನ್ನನ್ನು ಕೇಳುವವರಿಗೆ ಒಳ್ಳೆಯ ವಸ್ತುಗಳನ್ನು ನಿಶ್ಚಯವಾಗಿಯೂ ಕೊಡುತ್ತಾನೆ.
Eksplore ಮತ್ತಾಯನ ಸುವಾರ್ತೆ 7:11
8
ಮತ್ತಾಯನ ಸುವಾರ್ತೆ 7:1-2
“ಬೇರೆಯವರಿಗೆ ತೀರ್ಪು ನೀಡಬೇಡಿ. ಆಗ ದೇವರೂ ನಿಮಗೆ ತೀರ್ಪು ಮಾಡುವುದಿಲ್ಲ. ನೀವು ಬೇರೆಯವರಿಗೆ ತೀರ್ಪು ಮಾಡಿದರೆ, ಅದೇ ಪ್ರಕಾರ ನಿಮಗೂ ತೀರ್ಪಾಗುವುದು. ನೀವು ಬೇರೆಯವರನ್ನು ಕ್ಷಮಿಸಿದರೆ ನಿಮಗೂ ಕ್ಷಮೆ ದೊರೆಯುವುದು.
Eksplore ಮತ್ತಾಯನ ಸುವಾರ್ತೆ 7:1-2
9
ಮತ್ತಾಯನ ಸುವಾರ್ತೆ 7:26
“ಆದರೆ ನನ್ನ ಮಾತುಗಳನ್ನು ಕೇಳಿಯೂ ಅವುಗಳಿಗೆ ವಿಧೇಯನಾಗದವನು ಬುದ್ಧಿಹೀನನಾಗಿದ್ದಾನೆ. ಆ ಬುದ್ಧಿಹೀನನು ಮರಳಿನ ಮೇಲೆ ತನ್ನ ಮನೆಯನ್ನು ಕಟ್ಟಿದನು.
Eksplore ಮತ್ತಾಯನ ಸುವಾರ್ತೆ 7:26
10
ಮತ್ತಾಯನ ಸುವಾರ್ತೆ 7:3-4
“ನಿನ್ನ ಸ್ವಂತ ಕಣ್ಣಿನಲ್ಲಿ ಇರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಏಕೆ ನೋಡುವೆ? ‘ನಿನ್ನ ಕಣ್ಣಿನಲ್ಲಿರುವ ಅಣುವನ್ನು ನಾನು ಹೊರಗೆ ತೆಗೆಯುವೆನು’ ಎಂದು ನಿನ್ನ ಸಹೋದರನಿಗೆ ಹೇಳುವುದೇಕೆ? ಮೊದಲು ನಿನ್ನ ಕಣ್ಣನ್ನು ನೋಡಿಕೊ! ನಿನ್ನ ಕಣ್ಣಿನಲ್ಲಿ ತೊಲೆ ಇನ್ನೂ ಇದೆ.
Eksplore ಮತ್ತಾಯನ ಸುವಾರ್ತೆ 7:3-4
11
ಮತ್ತಾಯನ ಸುವಾರ್ತೆ 7:15-16
“ಸುಳ್ಳುಪ್ರವಾದಿಗಳ ಬಗ್ಗೆ ಎಚ್ಚರವಾಗಿರಿ. ಅವರು ಕುರಿಗಳ ಹಾಗೆ ಕಾಣಿಸಿಕೊಂಡು ನಿಮ್ಮ ಬಳಿಗೆ ಬರುತ್ತಾರೆ. ಆದರೆ ಅವರು ತೋಳಗಳಂತೆ ನಿಜವಾಗಿಯೂ ಅಪಾಯಕಾರಿಗಳಾಗಿದ್ದಾರೆ. ಅವರ ಕ್ರಿಯೆಗಳಿಂದ ನೀವು ಅವರನ್ನು ತಿಳಿದುಕೊಳ್ಳುವಿರಿ. ಮುಳ್ಳಿನ ಪೊದೆಗಳಲ್ಲಿ ದ್ರಾಕ್ಷಿಯು ಹೇಗೆ ದೊರೆಯುವುದಿಲ್ಲವೋ ಅದೇ ರೀತಿ ಒಳ್ಳೆಯವುಗಳು ಕೆಟ್ಟ ಜನಗಳಿಂದ ಬರುವುದಿಲ್ಲ. ಅಂಜೂರವು ಮುಳ್ಳುಗಿಡಗಳಲ್ಲಿ ದೊರೆಯುವುದಿಲ್ಲ.
Eksplore ಮತ್ತಾಯನ ಸುವಾರ್ತೆ 7:15-16
12
ಮತ್ತಾಯನ ಸುವಾರ್ತೆ 7:17
ಅದೇ ರೀತಿ ಪ್ರತಿಯೊಂದು ಒಳ್ಳೆಯ ಮರವು ಒಳ್ಳೆಯ ಫಲವನ್ನು ಕೊಡುತ್ತದೆ. ಕೆಟ್ಟ ಮರವು ಕೆಟ್ಟ ಫಲವನ್ನು ಕೊಡುತ್ತದೆ.
Eksplore ಮತ್ತಾಯನ ಸುವಾರ್ತೆ 7:17
13
ಮತ್ತಾಯನ ಸುವಾರ್ತೆ 7:18
ಒಳ್ಳೆಯ ಮರವು ಕೆಟ್ಟ ಫಲವನ್ನು ಕೊಡುವುದಿಲ್ಲ ಮತ್ತು ಕೆಟ್ಟ ಮರವು ಒಳ್ಳೆಯ ಫಲವನ್ನು ಕೊಡುವುದಿಲ್ಲ.
Eksplore ಮತ್ತಾಯನ ಸುವಾರ್ತೆ 7:18
14
ಮತ್ತಾಯನ ಸುವಾರ್ತೆ 7:19
ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಎಸೆಯಲಾಗುವುದು.
Eksplore ಮತ್ತಾಯನ ಸುವಾರ್ತೆ 7:19