ಯೆಹೋವ ದೇವರು ಹೇಳುವುದೇನೆಂದರೆ: “ದಿನಗಳು ಬರುವುವು,”
“ಆಗ ಉಳುವವನು ಕೊಯ್ಯುವವನನ್ನೂ,
ದ್ರಾಕ್ಷಿ ಮಾರುವವನು ಬೀಜ ಹಾಕುವವನನ್ನೂ ಹಿಂದಟ್ಟುವರು.
ಆಗ ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವುವು,
ಗುಡ್ಡಗಳೆಲ್ಲಾ ಕರಗುವುವು.
ನನ್ನ ಜನರಾದ ಇಸ್ರಾಯೇಲರನ್ನು ಸೆರೆಯಿಂದ ತಿರುಗಿ ಬರಮಾಡುವೆನು.
“ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು.
ದ್ರಾಕ್ಷಿತೋಟಗಳನ್ನು ನೆಟ್ಟು, ಅವುಗಳ ದ್ರಾಕ್ಷಾರಸವನ್ನು ಕುಡಿಯುವರು.
ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.