“ನನ್ನ ರಾಜ್ಯದ ಪ್ರತಿಯೊಬ್ಬ ಮನುಷ್ಯನು ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂಬ ನಿರ್ಣಯ ಹೊರಡಿಸಿದ್ದೇನೆ.
“ಅವರೇ ಜೀವವುಳ್ಳ ದೇವರಾಗಿದ್ದು,
ಎಂದೆಂದಿಗೂ ಸ್ಥಿರವಾಗಿರುವವರಾಗಿದ್ದಾರೆ.
ಅವರ ರಾಜ್ಯವು ನಾಶವಾಗದೆ,
ಅವರ ಆಳ್ವಿಕೆ ಶಾಶ್ವತವಾಗಿ ನಿಲ್ಲುವುದು.
ಅವರೇ ಉದ್ಧರಿಸುವವರೂ ರಕ್ಷಿಸುವವರೂ ಆಗಿದ್ದು,
ಪರಲೋಕದಲ್ಲಿಯೂ ಭೂಲೋಕದಲ್ಲಿಯೂ
ಅದ್ಭುತ ಮಹತ್ತುಗಳನ್ನು ನಡೆಸುತ್ತಾರೆ.
ದಾನಿಯೇಲನನ್ನು ಸಿಂಹಗಳ ಸಾಮರ್ಥ್ಯದಿಂದ
ಬಿಡಿಸಿದವರೂ ಅವರೇ!”