ಯೆಹೋವನು ಹೇಳುವುದೇನೆಂದರೆ, “ಒಂದು ಸಮಯವು ಬರುವುದು,
ಆಗ ಉಳುವವನು ಕೊಯ್ಯುವವನನ್ನೇ
ಮೀರಿಸಿ ಮುಂದೆ ಹೋಗುವನು.
ದ್ರಾಕ್ಷಿನೆಡುವವನು ದ್ರಾಕ್ಷಿಯನ್ನು ಕೊಯ್ಯುವನನ್ನೇ
ಮೀರಿಸಿ ಮುಂದೆ ಹೋಗುವನು.
ಬೆಟ್ಟಗಳಿಂದಲೂ ಪರ್ವತಗಳಿಂದಲೂ
ಸಿಹಿ ದ್ರಾಕ್ಷಾರಸವು ಹರಿದುಬರುವುದು.
ಸೆರೆಯಿಂದ ಬಿಡಿಸಿ ನನ್ನ ಜನರಾದ ಇಸ್ರೇಲನ್ನು
ಹಿಂದಕ್ಕೆ ಕರೆತರುವೆನು.
ಪಾಳುಬಿದ್ದ ಪಟ್ಟಣಗಳನ್ನು ತಿರುಗಿ ಕಟ್ಟಿ
ಅದರಲ್ಲಿ ವಾಸಿಸುವರು.
ದ್ರಾಕ್ಷಿತೋಟವನ್ನು ಮಾಡಿ
ಅದರಿಂದ ಸಿಗುವ ದ್ರಾಕ್ಷಾರಸವನ್ನು ಕುಡಿಯುವರು.
ತೋಟಗಳನ್ನು ಮಾಡಿ
ಅದರ ಫಲಗಳನ್ನು ಭೋಗಿಸುವರು.